ಬ್ರೇಕಿಂಗ್ ನ್ಯೂಸ್
01-08-21 08:11 pm Headline Karnataka News Network ಕ್ರೀಡೆ
ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 2ನೇ ಪದಕ ದಕ್ಕಿದೆ. ನಿನ್ನೆ ಸೆಮಿ ಫೈನಲ್ನಲ್ಲಿ ಸೋಲುಂಡಿದ್ದ ಪಿ.ವಿ.ಸಿಂಧು ಇಂದು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಚೀನಾದ ಹಿ ಬಿಂಗ್ಜಿಯೋ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಸಿಂಧು ಮುತ್ತಿಟ್ಟಿದ್ದಾರೆ.
ಇಂದು ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚೀನಾ ಆಟಗಾರ್ತಿಯನ್ನು 21-13, 21-15 ನೇರ ಸೆಟ್ಗಳಿಂದ ಮಣಿಸುವ ಮೂಲಕ ಕಂಚಿನ ಪದಕವನ್ನು ಸಿಂಧು ತಮ್ಮದಾಗಿಸಿಕೊಂಡಿದ್ದಾರೆ. ಪಿ.ವಿ.ಸಿಂಧು ಒಲಿಂಪಿಕ್ಸ್ನಲ್ಲಿ 2ನೇ ಬಾರಿ ಪದಕ ಗೆಲ್ಲುವ ಮೂಲಕ ಹೊಸ ಸಾಧನೆಗೆ ಪಾತ್ರರಾಗಿದ್ದಾರೆ. 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ನಲ್ಲಿ ಸಿಂಧು ಬೆಳ್ಳಿ ಪದಕವನ್ನು ಗೆದ್ದಿದ್ದರು. ಈಗ ಕಂಚಿನ ಪದಕದೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತ 2ನೇ ಪದಕ ತನ್ನದಾಗಿಸಿಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 62ನೇ ಸ್ಥಾನಕ್ಕೆ ಏರಿದೆ. ವೇಯ್ಟ್ ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
ನಿನ್ನೆ ಸೆಮಿ ಫೈನಲ್ನಲ್ಲಿ ಚೈನೀಸ್ ತೈಪೆಯ ತೈ ವಿರುದ್ಧ ಪರಾಭವಗೊಂಡಿದ್ದರು. ಚಿನ್ನದ ಪದಕ ಸಿಂಧು ಕೈ ತಪ್ಪಿತ್ತು. ಮಹಿಳಾ ಸಿಂಗಲ್ನಲ್ಲಿ ಸೆಮಿಸ್ ಪ್ರವೇಶಿಸಿದ್ದ ಸಿಂಧು ಚಿನ್ನದ ಪದಕ ನಿರೀಕ್ಷೆಯನ್ನು ಹುಟ್ಟಿಸಿದ್ದರು. ಆದರೆ ಚೈನೀಸ್ ತೈಪೆಯ ತೈ ಜು ಯಿಂಗ್ ವಿರುದ್ಧ 21-18, 21-12 ನೇರ ಸೆಟ್ ಗಳಲ್ಲಿ ಸಿಂಧು ಸೋಲನುಭವಿಸಿದರು.
ರಿಯೋ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆಲ್ಲಲು ಪಿ.ವಿ. ಸಿಂಧುಗೆ ಗೋಪಿಚಂದ್ ದೀರ್ಘಕಾಲ ತರಬೇತಿ ನೀಡಿದ್ದರು. ಆದರೆ ಈ ಬಾರಿ ಗೋಪಿಚಂದ್ ಅಕಾಡೆಮಿ ತೊರೆದು ಹೈದರಾಬಾದ್ನ ಗಚಿಬೌಲಿ ಕ್ರೀಡಾಂಗಣದಲ್ಲಿ ದಕ್ಷಿಣ ಕೊರಿಯಾದ ಪಾರ್ಕ್ ಟೇ ಸಾಂಗ್ ಎಂಬುವರ ಬಳಿ ಸಿಂಧು ಕೋಚಿಂಗ್ ಪಡೆದಿದ್ದಾರೆ.
PV Sindhu scripted history on Sunday as she defeated He Bing Jiao of China to become the first Indian woman to win two individual Olympic medals. Sindhu defeated He Bing Jiao 21-13 and 21-15 in the bronze medal match. Sindhu was clinical throughout the contest and didn't give her opponent any chance in the match. Sindhu had suffered a heart-breaking loss to world no.1 Tai Tzu Ying in the semi-final on Saturday. Sindhu lost the semi-final 18-21, 12-21.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm