ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am