ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm