ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm