ಬ್ರೇಕಿಂಗ್ ನ್ಯೂಸ್
30-08-21 11:30 am Mykhel: Madhukar shetty ಕ್ರೀಡೆ
ಟೋಕಿಯೋ, ಆಗಸ್ಟ್ 30: ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಕ್ರೀಡಾಪಟುಗಳು ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ. 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಇಂದು ಭಾರತದ ಶೂಟರ್ ಅವನಿ ಲೇಖರಾ ಚಿನ್ನಕ್ಕೆ ಗುರಿಯಿಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಚಿನ್ನದ ಪದಕ ಗೆದ್ದಿದೆ.
ಅವನಿ ಲೇಖರಾ ಚಿನ್ನದ ಪದಕ ಗೆಲ್ಲುವ ಮೂಲಕ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಸ್ಪರ್ಧಿ ಗೆದ್ದ ಪ್ರಪ್ರಥಮ ಚಿನ್ನದ ಪದಕ ಎಂಬ ಐತಿಹಾಸಿಕ ಸಾಧನೆಯಾನ್ನು ತಮ್ಮದಾಗಿಸಿದ್ದಾರೆ. ಇದು ಭಾರತ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಗೆದ್ದ ಒಟ್ಟಾರೆ ಐದನೇ ಚಿನ್ನದ ಪದಕವಾಗಿದೆ.

ಅವನಿ ಲೇಖರಾ ಫೈನಲ್ನಲ್ಲಿ ಒಟ್ಟು 249.6 ಅಂಕಗಳನ್ನು ಸಂಪಾದಿಸುವ ಮೂಲಕ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದ ಸಾಧನೆ ಮಾಡಿದ್ದಾರೆ. 2018ರ ಡಿಸೆಂಬರ್ನಲ್ಲಿ ಉಕ್ರೈನ್ನ ಇರ್ಯಾನಾ ಶೆಟ್ನಿಕ್ ಇಷ್ಟೇ ಅಂಕಗಳನ್ನು ಸಂಪಾದಿಸುವ ಮೂಲಕ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಭಾರತೀಯ ಶೂಟರ್ ಸರಿಗಟ್ಟಿದ್ದಾರೆ. 19ರ ಹರೆಯದ ಅವನಿ ಆರಂಭದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.
ಆದರೆ ನಂತರ ತಮ್ಮ ಪ್ರದರ್ಶನವನ್ನು ಉತ್ತಮಗೊಳಿಸುತ್ತಾ ಸಾಗಿದ್ದರು. ಕ್ವಾಲಿಫಿಕೇಶನ್ ಸುತ್ತಿನಲ್ಲಿ 621.7 ಅಂಕಗಳನ್ನು ಸಂಪಾದಿಸಿ 7ನೇ ಸ್ಥಾನವನ್ನು ಪಡೆದುಕೊಂಡು ಫೈನಲ್ಗೆ ಪ್ರವೇಶ ಪಡೆದಿದ್ದರು. ಆದರೆ ಫೈನಲ್ ಹಂತದಲ್ಲಿ ದಾಖಲೆಯ ಪ್ರದರ್ಶನ ನೀಡುವಲ್ಲಿ ಅವನಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am