ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm