ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm