ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm