ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm