ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm