ಬ್ರೇಕಿಂಗ್ ನ್ಯೂಸ್
25-04-22 12:55 pm Source: Vijayakarnataka ಕ್ರೀಡೆ
ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) ಟೂರ್ನಿಯ 70 ಲೀಗ್ ಪಂದ್ಯಗಳ ಪೈಕಿ 37 ಹಣಾಹಣಿಗಳು ಮುಕ್ತಾಯವಾಗಿವೆ. ಎರಡು ನೂತನ ಫ್ರಾಂಚೈಸಿಗಳು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ 2022ರ ಟೂರ್ನಿಯ ಪಾಯಿಂಟ್ಸ್ ಟೇಬಲ್ ಚಿತ್ರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ.
ಭಾನುವಾರದ ಪಂದ್ಯದ ಅಂತ್ಯಕ್ಕೆ ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಪಾಯಿಂಟ್ಸ್ ಟೇಬಲ್ನಲ್ಲಿ ಕ್ರಮವಾಗಿ ಅಗ್ರ 4 ಸ್ಥಾನಗಳನ್ನು ಅಲಂಕರಿಸಿವೆ. ಪ್ಲೇಆಫ್ಸ್ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಎಲ್ಲಾ ತಂಡಗಳಿಗೆ ಮುಂದಿನ ಪಂದ್ಯಗಳು ನಿರ್ಣಾಯಕವಾಗಿವೆ.
ಐಪಿಎಲ್ ನಿಯಮದ ಪ್ರಕಾರ ಲೀಗ್ ಪಂದ್ಯಗಳ ಅಂತ್ಯಕ್ಕೆ ಪಾಯಿಂಟ್ಸ್ ಟೇಬಲ್ನಲ್ಲಿ ಅತಿ ಹೆಚ್ಚು ಅಂಕ ಹಾಗೂ ಅತ್ಯುತ್ತಮ ರನ್ರೇಟ್ ಹೊಂದಿರುವ ಅಗ್ರ ನಾಲ್ಕು ತಂಡಗಳು ಪ್ಲೇಆಫ್ಸ್ಗೆ ಅರ್ಹತೆ ಪಡೆಯಲಿವೆ. ಆದರೆ, ಯಾವ ನಾಲ್ಕು ತಂಡಗಳು ನಾಕೌಟ್ ಹಂತ ತಲುಪಲಿವೆ ಎಂದು ಈಗಲೇ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ.
ಪ್ರಸ್ತುತ ಪಾಯಿಂಟ್ಸ್ ಟೇಬಲ್, ರನ್ ರೇಟ್ ಹಾಗೂ ತಂಡಗಳ ಪ್ರದರ್ಶನದ ಆಧಾರದ ಮೇಲೆ ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್, ಲಖನೌ ಸೂಪರ್ ಜಯಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್ಸ್ ರೇಸ್ನಲ್ಲಿ ಮುಂಚೂಣಿಯಲ್ಲಿವೆ.
ಇನ್ನುಳಿದ ತಂಡಗಳಾದ ಕೋಲ್ಕತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ಸ್ ತಲುಪಬೇಕೆಂದರೆ ಇನ್ನುಳಿದ ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲುವು ಪಡೆಯಬೇಕು ಹಾಗೂ ತಮ್ಮ ರನ್ರೇಟ್ ಅನ್ನು ಉತ್ತಮಪಡಿಸಿಕೊಳ್ಳಬೇಕಾದ ಅಗತ್ಯವಿದೆ. ಆದರೆ, ಇನ್ನೂ ಗೆಲುವು ಕಾಣದೆ ಸತತ 8 ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಮುಂಬೈ ಇಂಡಿಯನ್ಸ್ ಪ್ಲೇಆಫ್ಸ್ ರೇಸ್ನಿಂದ ಬಹುತೇಕ ಹೊರಬಿದ್ದಿದೆ.
ಪ್ಲೇಆಫ್ಸ್ ರೇಸ್ನಲ್ಲಿರುವ ಬಲಿಷ್ಠ ತಂಡಗಳು: 2022ರ ಐಪಿಎಲ್ ಟೂರ್ನಿಯ ಪಾಯಿಂಟ್ಸ್ ಟೇಬಲ್ ಪ್ರಕಾರ, ಗುಜರಾತ್ ಟೈಟನ್ಸ್ ತಂಡ 6 ಪಂದ್ಯಗಳ ಗೆಲುವಿನೊಂದಿಗೆ 12 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. 5 ಪಂದ್ಯಗಳ ಗೆಲುವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ 10 ಅಂಕಗಳನ್ನು ಕಲೆಹಾಕಿ ಎರಡನೇ ಸ್ಥಾನ ಅಲಂಕರಿಸಿದೆ. 10 ಅಂಕಗಳೊಂದಿಗೆ ರಾಜಸ್ಥಾನ್ ರಾಯನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಇಷ್ಟೇ ಅಂಕಗಳನ್ನು ಕಲೆಹಾಕಿರುವ ಲಖನೌ ಸೂಪರ್ ಜಯಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿವೆ.
ದೊಡ್ಡ ಅಂತರದಲ್ಲಿ ಗೆಲುವು ಅಗತ್ಯ: ಪಾಯಿಂಟ್ಸ್ ಟೇಬಲ್ನಲ್ಲಿ ಆರು ಅಂಕಗಳನ್ನು ಕಲೆ ಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಂದಿನ ಎಲ್ಲಾ ಪಂದ್ಯಗಳನ್ನು ಅತ್ಯುತ್ತಮ ರನ್ರೇಟ್ನೊಂದಿಗೆ ಗೆಲುವು ಪಡೆಯಬೇಕಾದ ಅಗತ್ಯವಿದೆ. ಇನ್ನುಳಿದ ಚೆನ್ನೈ ಸೂಪರ್ ಕಿಂಗ್ಸ್(4 ಅಂಕ) ಹಾಗೂ ಮುಂಬೈ ಇಂಡಿಯನ್ಸ್(0) ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಎರಡು ಸ್ಥಾನಗಳಿಗೆ ಕುಸಿದಿವೆ.
ಗಜರಾತ್ ಟೈಟನ್ಸ್ ಇನ್ನುಳಿದ 7 ಪಂದ್ಯಗಳಲ್ಲಿ ಗೆಲುವು ಪಡೆದರೆ 26 ಅಂಕಗಳನ್ನು ಕಲೆಹಾಕಲಿದೆ. ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇನ್ನುಳಿದ ಪಂದ್ಯಗಳನ್ನು ಗೆದ್ದರೆ 26 ಅಂಕಗಳನ್ನು ಗಳಿಸಲಿವೆ. ನಂತರ, ಆರ್ಸಿಬಿ ಮತ್ತು ಎಲ್ಎಸ್ಜಿ ಮುಂದಿನ ಪಂದ್ಯಗಳಲ್ಲಿ ಒಂದೂ ಸೋಲು ಕಾಣದೇ ಇದ್ದಲ್ಲಿ 22 ಅಂಕಗಳನ್ನು ಕಲೆ ಹಾಕಿ ಪಾಯಿಂಟ್ಸ್ ಟೇಬಲ್ನಲ್ಲಿ4ನೇ ಸ್ಥಾನ ಅಲಂಕರಿಸಲಿವೆ.
ಆರ್ಸಿಬಿಗೆ ಇನ್ನೂ 4 ಗೆಲುವು ಅಗತ್ಯ: ಇನ್ನುಳಿದ ಪಂದ್ಯಗಳನ್ನು ಗೆದ್ದರೂ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ತಂಡಗಳು 20 ಅಂಕಗಳನ್ನು ಕಲೆಹಾಕಿದರೆ, ಕೆಕೆಆರ್ ಮತ್ತು ಸಿಎಸ್ಕೆ 18 ಅಂಕ ಗಳಿಸಲಿವೆ. ಈ ಅಂಕಿ ಅಂಶಗಳ ಪ್ರಕಾರ ಗುಜರಾತ್, ರಾಜಸ್ಥಾನ್, ಹೈದರಾಬಾದ್ ತಂಡಗಳು ಸುಲಭವಾಗಿ ಪ್ಲೇಆಫ್ಸ್ ತಲುಪಲಿವೆ. ಆದರೆ, ಆರ್ಸಿಬಿ, ಲಖನೌ ಹಾಗೂ ಡೆಲ್ಲಿ ತಂಡಗಳು ಇನ್ನೂ ಕನಿಷ್ಠ 4 ಪಂದ್ಯಗಳಲ್ಲಿ ಗೆಲುವು ಪಡೆಯಬೇಕಾದ ಅಗತ್ಯವಿದೆ. ಮತ್ತೊಂದೆಡೆ ಪಂಜಾಬ್ ಮತ್ತು ಚೆನ್ನೈ ಪಾಲಿಗೆ ಮುಂದಿನ ಪಂದ್ಯಗಳು ತುಂಬಾ ಮುಖ್ಯವಾಗಿವೆ.
Ipl 2022 Royal Challengers Bangalore Still How Many Matches Should Win, All You Need To Know Possible Playoff Scenarios.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am